23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

ಉಜಿರೆ: ತೆಂಕುತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ಶ್ರೀ ರಾಕೇಶ್ ರೈ ಅಡ್ಕರವರ ಯಕ್ಷಗಾನ ತರಬೇತಿ ಸಂಸ್ಥೆ ಸನಾತನ ಯಕ್ಷಾಲಯ ಮಂಗಳೂರು ( ರಿ.) ಇದರ ಹದಿನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಪ್ರದರ್ಶನ “ಶ್ರೀಕೃಷ್ಣ ಲೀಲಾಮೃತಮ್” ನ ವೇದಿಕೆಯಲ್ಲಿ ಪ್ರಸಂಗ ಸಂಯೋಜಕರಾಗಿ ಸಹಕರಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್, ವೇಣೂರು ಇವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಗಣ್ಯರ ಸಮ್ಮುಖದಲ್ಲಿ ಜೂನ್‌ 24 ರಂದು ಸನ್ಮಾನಿಸಿದರು.

ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿದ ಈ ಪ್ರಸಂಗದಲ್ಲಿ ಒಟ್ಟು ಇನ್ನೂರ ಹದಿನೇಳು ವಿದ್ಯಾರ್ಥಿಗಳು ಪಾತ್ರವಹಿಸಿದ್ದು ಹದಿನೈದು ಗಂಟೆಗಳ ಕಾಲ ನಿರಂತರ ಪ್ರದರ್ಶನ ನೀಡಿ ಹೊಸ ದಾಖಲೆಯನ್ನು ಮಾಡಲಾಯಿತು. ಈ ಹಿಂದೆ ಇದೇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಕುರುಕ್ಷೇತ್ರ, ದಶಾವತಾರ ಹಾಗೂ ಏತದ್ಧಿ ರಾಮಾಯಣಂ ಎಂಬ ಯಕ್ಷಗಾನ ಪ್ರಸಂಗಗಳನ್ನು ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿ ಕೊಟ್ಟಿದ್ದರು.

Related posts

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!