25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!