25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಸಂಪ್ರದಾಯದಂತೆ ಭತ್ತದ ನಾಟಿಯನ್ನು ನೆರವೇರಿಸಲಾಯಿತು.
ಇಲ್ಲಿ ಬೆಳೆದ ಭತ್ತದ ತೆನೆಗಳನ್ನು ಚೌತಿ ಸಂದರ್ಭ ದೇಗುಲಕ್ಕೆ ಸಮರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು ಮಾತನಾಡಿ “ಗದ್ದೆಗಳನ್ನು ಹಡಿಲು ಬಿಡದೆ ಸಾಗುವಳಿ ಮಾಡಬೇಕು. ಇಂದು ಗದ್ದೆ ಬೇಸಾಯ ಬಹಳ ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಈ ಬಗ್ಗೆ ಯುವಜನತೆ ಹೆಚ್ಚಿನ ಉತ್ಸಾಹ ತೋರಬೇಕು. ನಾವು ತಿನ್ನುವ ಅನ್ನವನ್ನು ನಾವೇ ಬೆಳೆಯಬೇಕಾದ ಅಗತ್ಯವಿದೆ”ಎಂದು ಹೇಳಿದರು.


ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳಾದ ದಿನೇಶ ಗೌಡ, ಅಂಬಾ ಬಿ.ಆಳ್ವ, ಉಮೇಶ್ ಕೇಳ್ತಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!