25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್, ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ , ಮಹೇಶ. ಕೆ , ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಜಗನ್ನಾಥ ಎಮ್ ಉಪಸ್ಥಿತರಿದ್ದರು.

ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಥಿತಿಗಳನ್ನು ಮುಖ್ಯೋಪಾಧ್ಯಾಯರು ಸ್ವಾಗತಿಸಿ ಶಿಕ್ಷಕರಾದ ಕೃಷ್ಣ ಕುಮಾರ್ ಧನ್ಯವಾದವಿತ್ತರು. ಶಿಕ್ಷಕಿಯಾದ ಶ್ರೀಮತಿ ಉಷಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya
error: Content is protected !!