23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

ವೇಣೂರು : ಹೊಸಂಗಡಿ ಬಜೆಮನೆ ನಿವಾಸಿ, ದಿ| ಬಾಬು ಪೂಜಾರಿಯವರ ಪತ್ನಿ ಸಿರಿಯಮ್ಮ (87ವ) ಅವರು ಜೂ. 26 ರಂದು ನಿಧನ ಹೊಂದಿದರು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ನಾಟಿ ವೈದ್ಯೆಯಾಗಿ ಮೂಲವ್ಯಾದಿಗೆ ಮದ್ದು ನೀಡುತ್ತಿದ್ದರು.

ಮಂಗಳೂರು ಜಿ.ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಪಿ. ಧರಣೇಂದ್ರ ಕುಮಾರ್, ಹರಿಪ್ರಸಾದ್ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕ ಕೆ. ವಸಂತ ಬಂಗೇರ ಸೇರಿದಂತೆ ಹಲವು ಗಣ್ಯರು ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya
error: Content is protected !!