37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಿ.ಹಿಂ.ಪ ಹಾಗೂ ಭಜರಂಗದಳ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ಠಾಣೆಗೆ ಮೂಲಕ ನೀಡಲಾದ ಈ ಮನವಿಯಲ್ಲಿ ಇದೇ ಜೂನ್ 29, 30, ಜುಲೈ 1 ರಂದು ತಾರೀಕಿನಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ / ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತ ತಾವುಗಳು ಕ್ರಮಕೈಗೊಳ್ಳಬೇಕು. ಇದೇ ಸಂಧರ್ಭದಲ್ಲಿ ಗೋವುಗಳನ್ನು ಪಾಲಿಸುವವರ ಮನೆಯಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ಅಹೋ ರಾತ್ರಿ ಗಸ್ತು ಹಾಗು ಅಗತ್ಯ ಇದ್ದಲ್ಲೆಲ್ಲ ನಾಕಾಬಂದಿ ಹಾಕಬೇಕಾಗಿ ಒತ್ತಾಯಿಸಿದ್ದಾರೆ.

ಜುಲೈ 2 ರ ತನಕ ಯಾರು ಕೂಡ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆ ರೀತಿ ಗೋವಂಶ ತಂದು ಕಟ್ಟಿ ಹಾಕಿದ್ದು ಕಂಡರೆ ತಕ್ಷಣ ಅದಕ್ಕೆ ಪಶು ಸಂಗೋಪನಾ ಇಲಾಖೆಯವರು ಕಿವಿಯೋಲೆ ಹಾಕಿಸಿ, ಫೋಟೋ ತೆಗೆದಿರಿಸಿ ಮಾಲಕರ ಬಳಿ ಮುಚ್ಚಳಿಕೆ ತೆಗೆದುಕೊಳ್ಳಬೇಕು, ಜೂಲೈ 3 ರಂದು ಗೋವಂಶಗಳು ಬದುಕಿರುವ ಬಗ್ಗೆ ಅದನ್ನು ಖಾತ್ರಿ ಪಡೆಸಿಕೊಳ್ಳಬೇಕು, ಜೂಲೈ 3 ರ ಮೊದಲು ದನ ತೀರಿ ಹೋದರೆ ಅದನ್ನು ಹೂಳದ ಪೊಲೀಸರಿಗೂ ಮತ್ತು ಪಶು ಸಂಗೋಪನಾ ಇಲಾಖೆಯವರಿಗೆ ತಿಳಿಸಿ ಧಫನ ಮಾಡಿದನ್ನು ಖಾತ್ರಿ ಮಾಡಬೇಕು. ಒಂದು ವೇಳೆ ಜೂಲೈ 3 ರಂದು ಪರಿಶೀಲಿಸುವಾಗ ಅ ಗೋವಂಶಗಳು ಕಂಡು ಬರದಿದ್ದಲ್ಲಿ ಅವರ ಮೇಲೆ ಗೋಹತ್ಯಾ ನಿಷೇಧ ಕಾಯಿದೆ 2020 ರ ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಅಗ್ರಹಿಸಿದ್ದಾರೆ.

ಈ ಮನವಿ ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಸಂಯೋಜಕ ಸಂತೋಷ್ ಅತ್ತಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!