25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಿ.ಹಿಂ.ಪ ಹಾಗೂ ಭಜರಂಗದಳ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ಠಾಣೆಗೆ ಮೂಲಕ ನೀಡಲಾದ ಈ ಮನವಿಯಲ್ಲಿ ಇದೇ ಜೂನ್ 29, 30, ಜುಲೈ 1 ರಂದು ತಾರೀಕಿನಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ / ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತ ತಾವುಗಳು ಕ್ರಮಕೈಗೊಳ್ಳಬೇಕು. ಇದೇ ಸಂಧರ್ಭದಲ್ಲಿ ಗೋವುಗಳನ್ನು ಪಾಲಿಸುವವರ ಮನೆಯಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ಅಹೋ ರಾತ್ರಿ ಗಸ್ತು ಹಾಗು ಅಗತ್ಯ ಇದ್ದಲ್ಲೆಲ್ಲ ನಾಕಾಬಂದಿ ಹಾಕಬೇಕಾಗಿ ಒತ್ತಾಯಿಸಿದ್ದಾರೆ.

ಜುಲೈ 2 ರ ತನಕ ಯಾರು ಕೂಡ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆ ರೀತಿ ಗೋವಂಶ ತಂದು ಕಟ್ಟಿ ಹಾಕಿದ್ದು ಕಂಡರೆ ತಕ್ಷಣ ಅದಕ್ಕೆ ಪಶು ಸಂಗೋಪನಾ ಇಲಾಖೆಯವರು ಕಿವಿಯೋಲೆ ಹಾಕಿಸಿ, ಫೋಟೋ ತೆಗೆದಿರಿಸಿ ಮಾಲಕರ ಬಳಿ ಮುಚ್ಚಳಿಕೆ ತೆಗೆದುಕೊಳ್ಳಬೇಕು, ಜೂಲೈ 3 ರಂದು ಗೋವಂಶಗಳು ಬದುಕಿರುವ ಬಗ್ಗೆ ಅದನ್ನು ಖಾತ್ರಿ ಪಡೆಸಿಕೊಳ್ಳಬೇಕು, ಜೂಲೈ 3 ರ ಮೊದಲು ದನ ತೀರಿ ಹೋದರೆ ಅದನ್ನು ಹೂಳದ ಪೊಲೀಸರಿಗೂ ಮತ್ತು ಪಶು ಸಂಗೋಪನಾ ಇಲಾಖೆಯವರಿಗೆ ತಿಳಿಸಿ ಧಫನ ಮಾಡಿದನ್ನು ಖಾತ್ರಿ ಮಾಡಬೇಕು. ಒಂದು ವೇಳೆ ಜೂಲೈ 3 ರಂದು ಪರಿಶೀಲಿಸುವಾಗ ಅ ಗೋವಂಶಗಳು ಕಂಡು ಬರದಿದ್ದಲ್ಲಿ ಅವರ ಮೇಲೆ ಗೋಹತ್ಯಾ ನಿಷೇಧ ಕಾಯಿದೆ 2020 ರ ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಅಗ್ರಹಿಸಿದ್ದಾರೆ.

ಈ ಮನವಿ ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಸಂಯೋಜಕ ಸಂತೋಷ್ ಅತ್ತಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
error: Content is protected !!