September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಿ.ಹಿಂ.ಪ ಹಾಗೂ ಭಜರಂಗದಳ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ಠಾಣೆಗೆ ಮೂಲಕ ನೀಡಲಾದ ಈ ಮನವಿಯಲ್ಲಿ ಇದೇ ಜೂನ್ 29, 30, ಜುಲೈ 1 ರಂದು ತಾರೀಕಿನಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ / ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತ ತಾವುಗಳು ಕ್ರಮಕೈಗೊಳ್ಳಬೇಕು. ಇದೇ ಸಂಧರ್ಭದಲ್ಲಿ ಗೋವುಗಳನ್ನು ಪಾಲಿಸುವವರ ಮನೆಯಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ಅಹೋ ರಾತ್ರಿ ಗಸ್ತು ಹಾಗು ಅಗತ್ಯ ಇದ್ದಲ್ಲೆಲ್ಲ ನಾಕಾಬಂದಿ ಹಾಕಬೇಕಾಗಿ ಒತ್ತಾಯಿಸಿದ್ದಾರೆ.

ಜುಲೈ 2 ರ ತನಕ ಯಾರು ಕೂಡ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆ ರೀತಿ ಗೋವಂಶ ತಂದು ಕಟ್ಟಿ ಹಾಕಿದ್ದು ಕಂಡರೆ ತಕ್ಷಣ ಅದಕ್ಕೆ ಪಶು ಸಂಗೋಪನಾ ಇಲಾಖೆಯವರು ಕಿವಿಯೋಲೆ ಹಾಕಿಸಿ, ಫೋಟೋ ತೆಗೆದಿರಿಸಿ ಮಾಲಕರ ಬಳಿ ಮುಚ್ಚಳಿಕೆ ತೆಗೆದುಕೊಳ್ಳಬೇಕು, ಜೂಲೈ 3 ರಂದು ಗೋವಂಶಗಳು ಬದುಕಿರುವ ಬಗ್ಗೆ ಅದನ್ನು ಖಾತ್ರಿ ಪಡೆಸಿಕೊಳ್ಳಬೇಕು, ಜೂಲೈ 3 ರ ಮೊದಲು ದನ ತೀರಿ ಹೋದರೆ ಅದನ್ನು ಹೂಳದ ಪೊಲೀಸರಿಗೂ ಮತ್ತು ಪಶು ಸಂಗೋಪನಾ ಇಲಾಖೆಯವರಿಗೆ ತಿಳಿಸಿ ಧಫನ ಮಾಡಿದನ್ನು ಖಾತ್ರಿ ಮಾಡಬೇಕು. ಒಂದು ವೇಳೆ ಜೂಲೈ 3 ರಂದು ಪರಿಶೀಲಿಸುವಾಗ ಅ ಗೋವಂಶಗಳು ಕಂಡು ಬರದಿದ್ದಲ್ಲಿ ಅವರ ಮೇಲೆ ಗೋಹತ್ಯಾ ನಿಷೇಧ ಕಾಯಿದೆ 2020 ರ ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಅಗ್ರಹಿಸಿದ್ದಾರೆ.

ಈ ಮನವಿ ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಸಂಯೋಜಕ ಸಂತೋಷ್ ಅತ್ತಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya
error: Content is protected !!