24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಿ.ಹಿಂ.ಪ ಹಾಗೂ ಭಜರಂಗದಳ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ಠಾಣೆಗೆ ಮೂಲಕ ನೀಡಲಾದ ಈ ಮನವಿಯಲ್ಲಿ ಇದೇ ಜೂನ್ 29, 30, ಜುಲೈ 1 ರಂದು ತಾರೀಕಿನಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ / ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತ ತಾವುಗಳು ಕ್ರಮಕೈಗೊಳ್ಳಬೇಕು. ಇದೇ ಸಂಧರ್ಭದಲ್ಲಿ ಗೋವುಗಳನ್ನು ಪಾಲಿಸುವವರ ಮನೆಯಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ಅಹೋ ರಾತ್ರಿ ಗಸ್ತು ಹಾಗು ಅಗತ್ಯ ಇದ್ದಲ್ಲೆಲ್ಲ ನಾಕಾಬಂದಿ ಹಾಕಬೇಕಾಗಿ ಒತ್ತಾಯಿಸಿದ್ದಾರೆ.

ಜುಲೈ 2 ರ ತನಕ ಯಾರು ಕೂಡ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆ ರೀತಿ ಗೋವಂಶ ತಂದು ಕಟ್ಟಿ ಹಾಕಿದ್ದು ಕಂಡರೆ ತಕ್ಷಣ ಅದಕ್ಕೆ ಪಶು ಸಂಗೋಪನಾ ಇಲಾಖೆಯವರು ಕಿವಿಯೋಲೆ ಹಾಕಿಸಿ, ಫೋಟೋ ತೆಗೆದಿರಿಸಿ ಮಾಲಕರ ಬಳಿ ಮುಚ್ಚಳಿಕೆ ತೆಗೆದುಕೊಳ್ಳಬೇಕು, ಜೂಲೈ 3 ರಂದು ಗೋವಂಶಗಳು ಬದುಕಿರುವ ಬಗ್ಗೆ ಅದನ್ನು ಖಾತ್ರಿ ಪಡೆಸಿಕೊಳ್ಳಬೇಕು, ಜೂಲೈ 3 ರ ಮೊದಲು ದನ ತೀರಿ ಹೋದರೆ ಅದನ್ನು ಹೂಳದ ಪೊಲೀಸರಿಗೂ ಮತ್ತು ಪಶು ಸಂಗೋಪನಾ ಇಲಾಖೆಯವರಿಗೆ ತಿಳಿಸಿ ಧಫನ ಮಾಡಿದನ್ನು ಖಾತ್ರಿ ಮಾಡಬೇಕು. ಒಂದು ವೇಳೆ ಜೂಲೈ 3 ರಂದು ಪರಿಶೀಲಿಸುವಾಗ ಅ ಗೋವಂಶಗಳು ಕಂಡು ಬರದಿದ್ದಲ್ಲಿ ಅವರ ಮೇಲೆ ಗೋಹತ್ಯಾ ನಿಷೇಧ ಕಾಯಿದೆ 2020 ರ ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಅಗ್ರಹಿಸಿದ್ದಾರೆ.

ಈ ಮನವಿ ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಸಂಯೋಜಕ ಸಂತೋಷ್ ಅತ್ತಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!