25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!