September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!