July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಗಾಂಧಿ ಭವನದಲ್ಲಿ ಆಯೋಜಿಸಿದ್ದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.

ಹಂಪಿ ವಿವಿ ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ , ಖ್ಯಾತ ಸಾಹಿತಿ ಹಂ. ಪ ನಾಗರಾಜಯ್ಯ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಇವರು ಬರಹಗಾರರ ಪ್ರಕಾಶಕರ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದರು.
ಪ್ರತಿವರ್ಷ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಕೊಡುವ ಪ್ರಶಸ್ತಿ ಯನ್ನು ಮುಖ್ಯ ಮಂತ್ರಿಯವರು ಪ್ರದಾನ ಮಾಡಿದರು.
ಸಾಹಿತ್ಯ ರತ್ನ ಪ್ರಶಸ್ತಿ ಯನ್ನು ಪಿ ಎಸ್ ಶಂಕರ್, ಯುವ ಸಾಹಿತ್ಯ ಪ್ರಶಸ್ತಿ ಕೌಶಿಕ್ ಕೂಡುರಸ್ತೆ, ಪುಸ್ತಕ ರತ್ನ ಪ್ರಶಸ್ತಿ ಶ್ರೀರಾಮ್ ಮತ್ತು ಮುದ್ರಣ ರತ್ನ ಪ್ರಶಸ್ತಿಯನ್ನು ಕೃಷ್ಣಮೂರ್ತಿ ಅವರಿಗೆ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ವಿವರಗಳನ್ನೊಳಗೊಂಡ ಪುಸ್ತಕವನ್ನು ಮುಖ್ಯಮಂತ್ರಿ ಯವರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಆರ್ ದೊಡ್ಡೇಗೌಡ , ಕಾರ್ಯಕಾರಿ ಸಮಿತಿ ಸದಸ್ಯರಾದ ಪದ್ಮಲತಾ ಮೋಹನ್ ನಿಡ್ಲೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
error: Content is protected !!