ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 27 ರಂದು ನೆರವೇರಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾ.ಪಂ. ಸದಸ್ಯ. ರಾಮಚಂದ್ರ ರಾವ್ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಶಿಕ್ಷಕ ಪಿ. ಸುಬ್ರಮಣ್ಯ ರಾವ್ ಶಾಲೆಯಲ್ಲಿ ಇರುವ ಕಲಾ ಸಂಘ, ವಿಜ್ಞಾನ ಸಂಘ, ಕ್ರೀಡಾ ಸಂಘ, ಸಾಂಸ್ಕೃತಿಕ ಸಂಘಗಳನ್ನು ಶಿಕ್ಷಣದ ಜೊತೆಗೆ ನಿರ್ವಹಿಸಿಕೊಂಡು ಹೋಗಬೇಕು. ಸಂಘಗಳು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ, ಶ್ರೀಮತಿ ಕಾವ್ಯರವರು ಸ್ವಾಗತಿಸಿ, ಪೂರ್ಣಿಮಾ ಜೋಷಿ ನಿರ್ವಹಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಸಹಕರಿಸಿದರು.

Leave a Comment

error: Content is protected !!