22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ ಸಮಾರಂಭ ಇತ್ತೀಚೆಗೆ ನಡೆಯಿತು.

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ ಚಟುವಟಿಕೆಗಳನ್ನು ಡಿಜಿಟಲ್ ಆಗಿ ಉದ್ಘಾಟಿಸಿ, ಪ್ರಮಾಣವಚನವನ್ನು ಬೋದಿಸಿದರು.

ನಾಯಕನಾದವನು ಇತರರಿಗೆ ಮಾದರಿಯಾಗಿದ್ದು, ಬದ್ಧತೆಯೊಂದಿಗೆ, ಸ್ವಸಾಮರ್ಥ್ಯದಿಂದ, ಇತರರನ್ನು ಒಗ್ಗೂಡಿಸಿಕೊಂಡು ಕೈಗೊಂಡ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ನೂತನ ನಾಯಕರಿಗೆ ಸಲಹೆ ನೀಡಿ, ಶುಭ ಹಾರೈಸಿದರು.

ನೂತನ ವಿದ್ಯಾರ್ಥಿ ಸಂಸತ್ತಿನ ನಾಯಕ ರಘೋತ್ತಮ್, ಉಪನಾಯಕ ಆಯಷ್, ಸದಸ್ಯರಾದ ನಿಶ್ಚಲ್, ಸಮ್ಮೇದ್, ಆದಿತ್ಯ ಆರಿಗ,  ರಕ್ಷಣ್, ಆಶೀಶ್ ಕಾಮತ್ ಪ್ರಮಾಣವಚನ ಸ್ವೀಕರಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಯಶ್ವಿತಾ ಸ್ವಾಗತಿಸಿ, ಪ್ರಾಪ್ತಿ ವಂದಿಸಿ, ಅನನ್ಯ  ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
error: Content is protected !!