23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ ಸಮಾರಂಭ ಇತ್ತೀಚೆಗೆ ನಡೆಯಿತು.

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ ಚಟುವಟಿಕೆಗಳನ್ನು ಡಿಜಿಟಲ್ ಆಗಿ ಉದ್ಘಾಟಿಸಿ, ಪ್ರಮಾಣವಚನವನ್ನು ಬೋದಿಸಿದರು.

ನಾಯಕನಾದವನು ಇತರರಿಗೆ ಮಾದರಿಯಾಗಿದ್ದು, ಬದ್ಧತೆಯೊಂದಿಗೆ, ಸ್ವಸಾಮರ್ಥ್ಯದಿಂದ, ಇತರರನ್ನು ಒಗ್ಗೂಡಿಸಿಕೊಂಡು ಕೈಗೊಂಡ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ನೂತನ ನಾಯಕರಿಗೆ ಸಲಹೆ ನೀಡಿ, ಶುಭ ಹಾರೈಸಿದರು.

ನೂತನ ವಿದ್ಯಾರ್ಥಿ ಸಂಸತ್ತಿನ ನಾಯಕ ರಘೋತ್ತಮ್, ಉಪನಾಯಕ ಆಯಷ್, ಸದಸ್ಯರಾದ ನಿಶ್ಚಲ್, ಸಮ್ಮೇದ್, ಆದಿತ್ಯ ಆರಿಗ,  ರಕ್ಷಣ್, ಆಶೀಶ್ ಕಾಮತ್ ಪ್ರಮಾಣವಚನ ಸ್ವೀಕರಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಯಶ್ವಿತಾ ಸ್ವಾಗತಿಸಿ, ಪ್ರಾಪ್ತಿ ವಂದಿಸಿ, ಅನನ್ಯ  ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya
error: Content is protected !!