July 23, 2026
ವರದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

ಉಜಿರೆ: ಪ್ರಾಚೀನ ಇತಿಹಾಸದೊಂದಿಗೆ ಬೆರೆತಿರುವ ಭಾಷೆ ಸಂಸ್ಕೃತ. ವೈದಿಕ ಕಾಲದಲ್ಲಿಯೇ ಸಂಸ್ಕೃತದ ಔನತ್ಯವನ್ನು ಮನಗಾಣಬಹುದು. ಪಾಣಿನಿ ಮುಂತಾದ ವ್ಯಾಕರಣಕಾರರಿಂದ ಸಂಸ್ಕೃತವು ಶಿಸ್ತುಬದ್ಧವಾಗಿ ಬೆಳೆದುಬಂದಿದೆ. ಹೆಚ್ಚಿನ ಅರಿವು ಉಂಟಾಗಲು ಈಗ ಸಂಸ್ಕೃತ ಭಾಷೆಯ ಬಗ್ಗೆ ಸೂಕ್ತ ಅಧ್ಯಯನವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದ ಪ್ರದಾನ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳಿಂದ ಸಮೂಹ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.
ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ , ಉಪಾಧ್ಯಕ್ಷೆ ಹಿರಣ್ಮಯಿ ಶೆಟ್ಟಿ, ಅಂತರಾಧ್ಯಯನ ವೃತ್ತಂ ಇದರ ಸಂಯೋಜಕರಾದ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು.
ಅಕ್ಷತಾ ಎಂ.ಜಿ ನಿರೂಪಿಸಿ , ಆದಿತ್ಯ ಹೆಗಡೆ ವಂದಿಸಿದರು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya
error: Content is protected !!