23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

ಉಜಿರೆ: ಪ್ರಾಚೀನ ಇತಿಹಾಸದೊಂದಿಗೆ ಬೆರೆತಿರುವ ಭಾಷೆ ಸಂಸ್ಕೃತ. ವೈದಿಕ ಕಾಲದಲ್ಲಿಯೇ ಸಂಸ್ಕೃತದ ಔನತ್ಯವನ್ನು ಮನಗಾಣಬಹುದು. ಪಾಣಿನಿ ಮುಂತಾದ ವ್ಯಾಕರಣಕಾರರಿಂದ ಸಂಸ್ಕೃತವು ಶಿಸ್ತುಬದ್ಧವಾಗಿ ಬೆಳೆದುಬಂದಿದೆ. ಹೆಚ್ಚಿನ ಅರಿವು ಉಂಟಾಗಲು ಈಗ ಸಂಸ್ಕೃತ ಭಾಷೆಯ ಬಗ್ಗೆ ಸೂಕ್ತ ಅಧ್ಯಯನವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದ ಪ್ರದಾನ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳಿಂದ ಸಮೂಹ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.
ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ , ಉಪಾಧ್ಯಕ್ಷೆ ಹಿರಣ್ಮಯಿ ಶೆಟ್ಟಿ, ಅಂತರಾಧ್ಯಯನ ವೃತ್ತಂ ಇದರ ಸಂಯೋಜಕರಾದ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು.
ಅಕ್ಷತಾ ಎಂ.ಜಿ ನಿರೂಪಿಸಿ , ಆದಿತ್ಯ ಹೆಗಡೆ ವಂದಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!