ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!