March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ , ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು.ಯುವ ಜೇಸಿ ಕು. ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.

ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಶ್ರೀಮತಿ ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕು. ಕ್ರಪಾ ಅವರು ವಂದಿಸಿದರು.

Related posts

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!