25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ , ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು.ಯುವ ಜೇಸಿ ಕು. ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.

ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಶ್ರೀಮತಿ ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕು. ಕ್ರಪಾ ಅವರು ವಂದಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!