July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ , ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು.ಯುವ ಜೇಸಿ ಕು. ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.

ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಶ್ರೀಮತಿ ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕು. ಕ್ರಪಾ ಅವರು ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!