24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಸವಿತಾ ಕುಮಾರಿ, ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ ) ಅಳದಂಗಡಿ ಇಲ್ಲಿಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಅವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು.

ಕಾಶಿಪಟ್ಟಣ ಗ್ರಾ. ಪಂ. ಉಪಾಧ್ಯಕ್ಷ ಸತೀಶ್. ಕೆ. ಸವಿತಾ ಕುಮಾರಿ ರವರನ್ನು ಸನ್ಮಾನಿಸಿದರು. ಶಾಲಾ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ತಮ್ಮ ಸವಿ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಸನ್ಮಾನ ಸ್ವೀಕರಿಸಿದ ಸವಿತಾ ಕುಮಾರಿ ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಶ್ರೀಮತಿ ಪದ್ಮಿನಿ, ಎಸ್‌.ಡಿ.ಎಂ.ಸಿ ಸದಸ್ಯ ಯಶೋಧರ ನಲ್ಲರಬೆಟ್ಟು, ಮತ್ತು ಶಾಲಾ ಅಕ್ಷರ ದಾಸೋಹ ಸಿಬ್ಬಂದಿ ವರ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಸರೀನ್ ತಾಜ್ ವಂದಿಸಿದರು. ಶ್ರೀಮತಿ ವಿಜಯಾಂಬಿಕಾ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya
error: Content is protected !!