23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ , ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು.ಯುವ ಜೇಸಿ ಕು. ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.

ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಶ್ರೀಮತಿ ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕು. ಕ್ರಪಾ ಅವರು ವಂದಿಸಿದರು.

Related posts

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!