April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಸವಿತಾ ಕುಮಾರಿ, ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ ) ಅಳದಂಗಡಿ ಇಲ್ಲಿಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಅವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು.

ಕಾಶಿಪಟ್ಟಣ ಗ್ರಾ. ಪಂ. ಉಪಾಧ್ಯಕ್ಷ ಸತೀಶ್. ಕೆ. ಸವಿತಾ ಕುಮಾರಿ ರವರನ್ನು ಸನ್ಮಾನಿಸಿದರು. ಶಾಲಾ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ತಮ್ಮ ಸವಿ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಸನ್ಮಾನ ಸ್ವೀಕರಿಸಿದ ಸವಿತಾ ಕುಮಾರಿ ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಶ್ರೀಮತಿ ಪದ್ಮಿನಿ, ಎಸ್‌.ಡಿ.ಎಂ.ಸಿ ಸದಸ್ಯ ಯಶೋಧರ ನಲ್ಲರಬೆಟ್ಟು, ಮತ್ತು ಶಾಲಾ ಅಕ್ಷರ ದಾಸೋಹ ಸಿಬ್ಬಂದಿ ವರ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಸರೀನ್ ತಾಜ್ ವಂದಿಸಿದರು. ಶ್ರೀಮತಿ ವಿಜಯಾಂಬಿಕಾ ನಿರೂಪಿಸಿದರು.

Related posts

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya
error: Content is protected !!