September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಸವಿತಾ ಕುಮಾರಿ, ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ ) ಅಳದಂಗಡಿ ಇಲ್ಲಿಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಅವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು.

ಕಾಶಿಪಟ್ಟಣ ಗ್ರಾ. ಪಂ. ಉಪಾಧ್ಯಕ್ಷ ಸತೀಶ್. ಕೆ. ಸವಿತಾ ಕುಮಾರಿ ರವರನ್ನು ಸನ್ಮಾನಿಸಿದರು. ಶಾಲಾ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ತಮ್ಮ ಸವಿ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಸನ್ಮಾನ ಸ್ವೀಕರಿಸಿದ ಸವಿತಾ ಕುಮಾರಿ ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಶ್ರೀಮತಿ ಪದ್ಮಿನಿ, ಎಸ್‌.ಡಿ.ಎಂ.ಸಿ ಸದಸ್ಯ ಯಶೋಧರ ನಲ್ಲರಬೆಟ್ಟು, ಮತ್ತು ಶಾಲಾ ಅಕ್ಷರ ದಾಸೋಹ ಸಿಬ್ಬಂದಿ ವರ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಸರೀನ್ ತಾಜ್ ವಂದಿಸಿದರು. ಶ್ರೀಮತಿ ವಿಜಯಾಂಬಿಕಾ ನಿರೂಪಿಸಿದರು.

Related posts

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
error: Content is protected !!