ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನ ವಿಕಾಸ ಕೇಂದ್ರ ಗಳ ನಿರ್ವಹಣೆ ಮಾಡುತ್ತಿರುವ ಸೇವಾ ಪ್ರತಿನಿಧಿಗಳ ಸಭೆಯನ್ನು ಗುರುವಾಯನಕೆರೆ ಕುಲಾಲ ಭವನದಲ್ಲಿ ನಡೆಸಲಾಯಿತು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಜ್ಞಾನ ವಿಕಾಸ ಕೇಂದ್ರಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಬಗ್ಗೆ ತಿಳುವಳಿಕೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಅಮೃತರವರು ಕ್ರಿಯಾ ಯೋಜನೆಯ ವಿಂಗಡಣೆ ಮಾಡಿ ಅನುಷ್ಟಾನದ ಬಗ್ಗೆ, ಯೂಟ್ಯೂಬ್ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿಯಾದ ದಯಾನಂದ ಪೂಜಾರಿರವರು ಪ್ರತಿ ತಿಂಗಳು ಜ್ಞಾನ ವಿಕಾಸ ಕೇಂದ್ರ ದಲ್ಲಿ ವಿನೂತನ ಕಾರ್ಯಕ್ರಮವನ್ನು ನಡೆಸುವ ಬಗ್ಗೆ, ಹಾಗೂ ಸೇವಾಪ್ರತಿನಿಧಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಹರಿಣಿ, ಹಾಗೂ ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು

Leave a Comment

error: Content is protected !!