25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಬೆಳ್ತಂಗಡಿ ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಫ್ಟಿಸ್ಟ್ ಡಿಸೋಜ ರವರು ಜಿಲ್ಲೆಯ ವಿಕಲಚೇತನರ ಸಮಸ್ಯೆಗಳ ಬಗ್ಗೆ ಅವರಿಗೆ ಲಿಖಿತ ಮನವಿ ಅರ್ಪಿಸಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು, ಇಂತಹ ಸಮಸ್ಯೆಗಳಿದ್ದರೆ ವಿಳಂಬ ಮಾಡದೆ ತಕ್ಷಣ ಪತ್ರ ವ್ಯವಹಾರ ಮಾಡುವ ಬಗ್ಗೆ ನಿರ್ದೇಶನ ನೀಡಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಯಾವುದೇ ಸಮಸ್ಯೆಗಳಿದ್ದರೆ ಆಡಳಿತ ವ್ಯವಸ್ಥೆಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಈರಣ್ಣ ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya
error: Content is protected !!