September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಬೆಳ್ತಂಗಡಿ ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಫ್ಟಿಸ್ಟ್ ಡಿಸೋಜ ರವರು ಜಿಲ್ಲೆಯ ವಿಕಲಚೇತನರ ಸಮಸ್ಯೆಗಳ ಬಗ್ಗೆ ಅವರಿಗೆ ಲಿಖಿತ ಮನವಿ ಅರ್ಪಿಸಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು, ಇಂತಹ ಸಮಸ್ಯೆಗಳಿದ್ದರೆ ವಿಳಂಬ ಮಾಡದೆ ತಕ್ಷಣ ಪತ್ರ ವ್ಯವಹಾರ ಮಾಡುವ ಬಗ್ಗೆ ನಿರ್ದೇಶನ ನೀಡಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಯಾವುದೇ ಸಮಸ್ಯೆಗಳಿದ್ದರೆ ಆಡಳಿತ ವ್ಯವಸ್ಥೆಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಈರಣ್ಣ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!