September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41ವ) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಜೂ.27 ರಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್‌ ಎಸ್‌ ರವರು ಜೂ. 27 ರಂದು ಅಪರಾಧಿಗೆ ಕಲಂ: 498 (ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಸಜೆ ಹಾಗೂ 10 ಸಾವಿರ ರೂ ದಂಡ ಹಾಗೂ ಕಲಂ: 304 ಐಪಿಸಿ ಅಪರಾಧಕ್ಕಾಗಿ 7 ವರ್ಷಗಳ ಕಠಿಣ ಸಜೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

ಘಟನೆ ವಿವರ: ಬೆಳ್ತಂಗಡಿ ತಾಲೂಕು ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ ಎಂಬಾತ ಸೌಮ್ಯ ಫ್ರಾನ್ಸಿಸ್ ರವರನ್ನು ಮದುವೆಯಾದ ಸ್ವಲ್ಪ ಸಮಯದ ನಂತರ ಪತ್ನಿಯೊಂದಿಗೆ ವಿನಾಕಾರಣ ಕ್ಷುಲ್ಲಕ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದವನು , ದಿನಾಂಕ 07.01.2021 ರಂದು ರಾತ್ರಿ ಸುಮಾರು 7.30 ಗಂಟೆಯಿಂದ 8.30 ಗಂಟೆಯ ಮದ್ಯೆ ತನ್ನ ಮನೆಯಲ್ಲಿ ಹೆಂಡತಿಯ ಜೊತೆ ಮಾತಿನ ಗಲಾಟೆ ನಡೆಸಿ ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ದಿನಾಂಕ:08/01/2021 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಠಾಣೆಯಲ್ಲಿ ಅಕ್ರ: 02/2021 ಕಲಂ: 498(ಎ) 302 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಬಳಿಕ ಆ ಸಮಯದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರು ಪ್ರಕರಣದಲ್ಲಿ ಆರೋಪಿ ಜಾನ್ಸನ್ ಕೆ ಎಂ ಎಂಬಾತನನ್ನು ಬಂಧಿಸಿ ಸೂಕ್ತ ಸಾಕ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya
error: Content is protected !!