26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

ತಣ್ಣೀರುಪಂತ : ಕಲ್ಲೇರಿ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜೂ.24 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಜೂ.28 ರಂದು ಆಯ್ಕೆಯಾದರು.

ನಿರ್ದೇಶಕರು ಸಾಮಾನ್ಯ 7 ಸ್ಥಾನಕ್ಕೆ ಬಿ. ನಿರಂಜನ್, ಪಿ. ಜಯರಾಜ್ ಹೆಗ್ಡೆ, ಜಾನ್ ಫೆಲಿಕ್ಸ್ ಲೋಬೊ, ಎನ್. ಪ್ರಸನ್ನ, ಜನಾರ್ಧನ ಗೌಡ, ವಜ್ರ ಕುಮಾರ್, ಕೃಷ್ಣಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಬಿ. ಶೂರ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಚೋಮ ನಾಯ್ಕ್, ಹಿಂದುಳಿದ ವರ್ಗ ಎ. ವರ್ಗದಿಂದ ತಿಮ್ಮಪ್ಪ ಸಾಲಿಯಾನ್,, ಹಿಂದುಳಿದ ವರ್ಗ ಬಿ. ವರ್ಗದಿಂದ ಪಿ. ದಿನೇಶ್ ಗೌಡ, 2 ಸ್ಥಾನ ಮಹಿಳಾ ಮೀಸಲು ಕ್ಷೇತ್ರದಿಂದ ಹಾಜಿರಾ, ಕೆ. ಪುಷ್ಪ ಇವರು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸುಳ್ಯ ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಿರ್ವಹಿಸಿದರು. ಕಾರ್ಯದರ್ಶಿ ಜಯರಾಜ್ ಜೈನ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya
error: Content is protected !!