23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

ತಣ್ಣೀರುಪಂತ : ಕಲ್ಲೇರಿ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜೂ.24 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಜೂ.28 ರಂದು ಆಯ್ಕೆಯಾದರು.

ನಿರ್ದೇಶಕರು ಸಾಮಾನ್ಯ 7 ಸ್ಥಾನಕ್ಕೆ ಬಿ. ನಿರಂಜನ್, ಪಿ. ಜಯರಾಜ್ ಹೆಗ್ಡೆ, ಜಾನ್ ಫೆಲಿಕ್ಸ್ ಲೋಬೊ, ಎನ್. ಪ್ರಸನ್ನ, ಜನಾರ್ಧನ ಗೌಡ, ವಜ್ರ ಕುಮಾರ್, ಕೃಷ್ಣಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಬಿ. ಶೂರ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಚೋಮ ನಾಯ್ಕ್, ಹಿಂದುಳಿದ ವರ್ಗ ಎ. ವರ್ಗದಿಂದ ತಿಮ್ಮಪ್ಪ ಸಾಲಿಯಾನ್,, ಹಿಂದುಳಿದ ವರ್ಗ ಬಿ. ವರ್ಗದಿಂದ ಪಿ. ದಿನೇಶ್ ಗೌಡ, 2 ಸ್ಥಾನ ಮಹಿಳಾ ಮೀಸಲು ಕ್ಷೇತ್ರದಿಂದ ಹಾಜಿರಾ, ಕೆ. ಪುಷ್ಪ ಇವರು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸುಳ್ಯ ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಿರ್ವಹಿಸಿದರು. ಕಾರ್ಯದರ್ಶಿ ಜಯರಾಜ್ ಜೈನ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya
error: Content is protected !!