July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ , ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು.ಯುವ ಜೇಸಿ ಕು. ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.

ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಶ್ರೀಮತಿ ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕು. ಕ್ರಪಾ ಅವರು ವಂದಿಸಿದರು.

Related posts

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya
error: Content is protected !!