23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಸವಿತಾ ಕುಮಾರಿ, ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ ) ಅಳದಂಗಡಿ ಇಲ್ಲಿಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಅವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು.

ಕಾಶಿಪಟ್ಟಣ ಗ್ರಾ. ಪಂ. ಉಪಾಧ್ಯಕ್ಷ ಸತೀಶ್. ಕೆ. ಸವಿತಾ ಕುಮಾರಿ ರವರನ್ನು ಸನ್ಮಾನಿಸಿದರು. ಶಾಲಾ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ತಮ್ಮ ಸವಿ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಸನ್ಮಾನ ಸ್ವೀಕರಿಸಿದ ಸವಿತಾ ಕುಮಾರಿ ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಶ್ರೀಮತಿ ಪದ್ಮಿನಿ, ಎಸ್‌.ಡಿ.ಎಂ.ಸಿ ಸದಸ್ಯ ಯಶೋಧರ ನಲ್ಲರಬೆಟ್ಟು, ಮತ್ತು ಶಾಲಾ ಅಕ್ಷರ ದಾಸೋಹ ಸಿಬ್ಬಂದಿ ವರ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಸರೀನ್ ತಾಜ್ ವಂದಿಸಿದರು. ಶ್ರೀಮತಿ ವಿಜಯಾಂಬಿಕಾ ನಿರೂಪಿಸಿದರು.

Related posts

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!