March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ


ಪೆರಾಡಿ : ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪೆರಾಡಿ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದ್ರೆ, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಯುವವಾಹಿನಿ ಮೂಡಬಿದ್ರೆ ಮತ್ತು ವೇಣೂರು ಘಟಕ ಹಾಗೂ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಹಯೋಗದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ, ಯೆನಪೋಯ ದಂತ ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯರ ತಂಡದವರಿಂದ ಉಚಿತ ದಂತ ಚಿಕಿತ್ಸಾ ಶಿಬಿರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಮಂಗಳೂರು ಇವರ ಸಹಕಾರದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜು.2 ರಂದು ಬೆಳಗ್ಗೆ 9.30ರಿಂದ 12.30 ವರೆಗೆ ಸಂತೃಪ್ತಿ ಸಭಾಭವನ, ಪೆರಿಂಜೆಯಲ್ಲಿ ನಡೆಯಲಿದೆ,
ಉಚಿತ ಚಿಕಿತ್ಸೆಗಳಾದ ಚರ್ಮ, ಎಲುಬು, ಕಣ್ಣು, ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಜನರಲ್ ಚೆಕ್ ಅಪ್, ಇ.ಸಿ.ಜಿ., ದಂತ ಚಿಕಿತ್ಸೆ ತಪಾಸಣೆ ಮಾಡಲಾಗುವುದು.

Related posts

ಡಿ.26 ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!