July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತ ಯಿಂದ ಗುರುಪೂರ್ಣಿಮಾ ಮಹೋತ್ಸವವು ಜು.3ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಜೆ 4.30 ಗಂಟೆಗೆ ನಡೆಯಲಿದೆ.

ಜಗದ್ಗುರು ಭಗವಾನ್ ಶ್ರೀಕೃಷ್ಣನು ಶಿಷ್ಯ ಅರ್ಜುನನಿಗೆ ಅಮೂಲ್ಯ ಮಾರ್ಗದರ್ಶನ ಮಾಡಿ, ದ್ವಾಪರಯುಗದಲ್ಲಿ ಧರ್ಮ- ಸಂಸ್ಥಾಪನೆಯನ್ನು ಮಾಡಿದನು. ಅದೇ ರೀತಿ ಕಲಿಯುಗದಲ್ಲಿ ನಾವೂ ಸಹ ಗುರುಗಳ ಮಾರ್ಗದರ್ಶನಕ್ಕನುಸಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ. ಗುರುಗಳ ಕೃಪೆಯನ್ನು ಸಂಪಾದಿಸಲು ಗುರುಗಳ, ಧರ್ಮಸಂಸ್ಥಾಪನೆಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ನಾವೂ ಮಾಡಬೇಕು. ಇದರ ವಿಷಯದಲ್ಲಿ ವಿವರವಾದ ವಿವೇಚನೆ ಮಾಡಬೇಕೆಂದು, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಸ್ವರೂಪ: ಶ್ರೀ ವ್ಯಾಸಪೂಜೆ, ಶ್ರೀ ಗುರುಗಳ ಪ್ರತಿಮೆಯ ಪೂಜೆ, ಹಿಂದೂ ಜನಜಾಗೃತಿ ಸಮಿತಿಯ ಸ್ವರಕ್ಷಣಾ ತರಬೇತಿ ವರ್ಗದಲ್ಲಿನ ಯುವಕರಿಂದ ಉಪಯುಕ್ತ ಪ್ರಾತ್ಯಕ್ಷಿಕೆಗಳು, ಸಾತ್ವಿಕ ಗ್ರಂಥ ಮತ್ತು ಉತ್ಪನ್ನಗಳ ಪ್ರದರ್ಶನ

ಕಿರುಚಿತ್ರ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸುವ ಫಲಕಗಳ ಪ್ರದರ್ಶನ, ಸಮಾಜ, ರಾಷ್ಟ್ರ ಮತ್ತು ಧರ್ಮದ ಬಗ್ಗೆ ಸಮಾಜದಲ್ಲಿನ ಗಣ್ಯರ ಅಮೂಲ್ಯ ವಿಚಾರ.

Related posts

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!