24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತ ಯಿಂದ ಗುರುಪೂರ್ಣಿಮಾ ಮಹೋತ್ಸವವು ಜು.3ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಜೆ 4.30 ಗಂಟೆಗೆ ನಡೆಯಲಿದೆ.

ಜಗದ್ಗುರು ಭಗವಾನ್ ಶ್ರೀಕೃಷ್ಣನು ಶಿಷ್ಯ ಅರ್ಜುನನಿಗೆ ಅಮೂಲ್ಯ ಮಾರ್ಗದರ್ಶನ ಮಾಡಿ, ದ್ವಾಪರಯುಗದಲ್ಲಿ ಧರ್ಮ- ಸಂಸ್ಥಾಪನೆಯನ್ನು ಮಾಡಿದನು. ಅದೇ ರೀತಿ ಕಲಿಯುಗದಲ್ಲಿ ನಾವೂ ಸಹ ಗುರುಗಳ ಮಾರ್ಗದರ್ಶನಕ್ಕನುಸಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ. ಗುರುಗಳ ಕೃಪೆಯನ್ನು ಸಂಪಾದಿಸಲು ಗುರುಗಳ, ಧರ್ಮಸಂಸ್ಥಾಪನೆಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ನಾವೂ ಮಾಡಬೇಕು. ಇದರ ವಿಷಯದಲ್ಲಿ ವಿವರವಾದ ವಿವೇಚನೆ ಮಾಡಬೇಕೆಂದು, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಸ್ವರೂಪ: ಶ್ರೀ ವ್ಯಾಸಪೂಜೆ, ಶ್ರೀ ಗುರುಗಳ ಪ್ರತಿಮೆಯ ಪೂಜೆ, ಹಿಂದೂ ಜನಜಾಗೃತಿ ಸಮಿತಿಯ ಸ್ವರಕ್ಷಣಾ ತರಬೇತಿ ವರ್ಗದಲ್ಲಿನ ಯುವಕರಿಂದ ಉಪಯುಕ್ತ ಪ್ರಾತ್ಯಕ್ಷಿಕೆಗಳು, ಸಾತ್ವಿಕ ಗ್ರಂಥ ಮತ್ತು ಉತ್ಪನ್ನಗಳ ಪ್ರದರ್ಶನ

ಕಿರುಚಿತ್ರ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸುವ ಫಲಕಗಳ ಪ್ರದರ್ಶನ, ಸಮಾಜ, ರಾಷ್ಟ್ರ ಮತ್ತು ಧರ್ಮದ ಬಗ್ಗೆ ಸಮಾಜದಲ್ಲಿನ ಗಣ್ಯರ ಅಮೂಲ್ಯ ವಿಚಾರ.

Related posts

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!