32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!