April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Related posts

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!