ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Leave a Comment

error: Content is protected !!