September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!