25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Related posts

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!