25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!