July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ ಶ್ರೀಮಾನ್ ತುಳಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಔಷಧೀಯ ಗಿಡಗಳ ಮಹತ್ವದ ಬಗ್ಗೆ ತಿಳಿಸಿ, ಔಷಧೀಯ ಗಿಡಗಳನ್ನು ಗುರುತಿಸಿ ಅವುಗಳನ್ನು ಪೋಷಿಸಿ,ರಕ್ಷಿಸುವ ಕೆಲಸವನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ತಿಳಿಸಿದರು.

ಅಧ್ಯಾಪಕಸುರೇಶ್ ಎಂ.ಟಿ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಣ ಸಂಸ್ಥೆಯ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

Related posts

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya
error: Content is protected !!