23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯಿಂದ ನೀಡಿದ 2023-24 ಸಾಲಿನ ಯೋಜನಾ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 30 ರಂದು ನಡೆಯಿತು.

ಯೋಜನಾ ಪುಸ್ತಕ ಬಿಡುಗಡೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರಾದ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೀರೂಪಾಕ್ಷಪ್ಪ, ಪ್ರಭಾರ ಆರೋಗ್ಯಧಿಕಾರಿ ಪ್ರಕಾಶ್, ಸರಕಾರಿ ನೌಕರರ ಅಧ್ಯಕ್ಷರಾದ ಜಯರಾಜ್ ಹಾಗೂ ಪದಾಧಿಕಾರಿಗಳು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಸಕರಾಗಿ ಪುನರ್ ಆಯ್ಕೆಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ ನಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಎಚ್ ಪದ್ಮ ಕುಮಾರ್, ನಿಕಟ ಪೂರ್ವ ಅಧ್ಯಕ್ಷರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕೋಶಾಧಿಕಾರಿ ಶ್ರೀ ಬೆಳ್ಳಿಯಪ್ಪ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಎಡಿಸಿ ಲೋಕೇಶ್ವರಿ ವಿನಯ ಚಂದ್ರ, ವಾಟರ್ ಜೆ ಪಿಂಟೋ,ಹಿರಿಯ ತರಬೇತುದಾರರಾದ ರಮೇಶ್ ಆಚಾರ್ಯ,ಸ್ಥಳೀಯ ಸಂಸ್ಥೆಯ ದಳ ನಾಯಕರುಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya
error: Content is protected !!