April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು.

ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇವರು ಜಿಎಸ್​ಟಿಯನ್ನು ಉದ್ಘಾಟಿಸಿದರು. ಅದರ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಸ್ನಾತ್ತಕೋತ್ತರ ವಿಭಾಗದಿಂದ ಜಿಎಸ್ಟಿ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ವರವೋ ಶಾಪವೋ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆಪ್ತ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ| ರವಿ ಎಂ ಎನ್ ಇವರು ಪ್ರಸ್ತಾವನೆಗೆದರು. ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ಪದ್ಮನಾಭ ಇವರು ಜಿಎಸ್‌ಟಿ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಅಧ್ಯಕ್ಷತೆ ವಹಿಸಿದರು. ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಕುಮಾರಿ ರಮ್ಯಾ ಸ್ವಾಗತಿಸಿ ಕುಮಾರಿ ಸುಚಿತ್ರ ವಂದಿಸಿದರು.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!