22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು.

ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇವರು ಜಿಎಸ್​ಟಿಯನ್ನು ಉದ್ಘಾಟಿಸಿದರು. ಅದರ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಸ್ನಾತ್ತಕೋತ್ತರ ವಿಭಾಗದಿಂದ ಜಿಎಸ್ಟಿ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ವರವೋ ಶಾಪವೋ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆಪ್ತ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ| ರವಿ ಎಂ ಎನ್ ಇವರು ಪ್ರಸ್ತಾವನೆಗೆದರು. ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ಪದ್ಮನಾಭ ಇವರು ಜಿಎಸ್‌ಟಿ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಅಧ್ಯಕ್ಷತೆ ವಹಿಸಿದರು. ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಕುಮಾರಿ ರಮ್ಯಾ ಸ್ವಾಗತಿಸಿ ಕುಮಾರಿ ಸುಚಿತ್ರ ವಂದಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!