25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು.

ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇವರು ಜಿಎಸ್​ಟಿಯನ್ನು ಉದ್ಘಾಟಿಸಿದರು. ಅದರ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಸ್ನಾತ್ತಕೋತ್ತರ ವಿಭಾಗದಿಂದ ಜಿಎಸ್ಟಿ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ವರವೋ ಶಾಪವೋ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆಪ್ತ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ| ರವಿ ಎಂ ಎನ್ ಇವರು ಪ್ರಸ್ತಾವನೆಗೆದರು. ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ಪದ್ಮನಾಭ ಇವರು ಜಿಎಸ್‌ಟಿ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಅಧ್ಯಕ್ಷತೆ ವಹಿಸಿದರು. ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಕುಮಾರಿ ರಮ್ಯಾ ಸ್ವಾಗತಿಸಿ ಕುಮಾರಿ ಸುಚಿತ್ರ ವಂದಿಸಿದರು.

Related posts

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya
error: Content is protected !!