24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ ಶ್ರೀಮಾನ್ ತುಳಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಔಷಧೀಯ ಗಿಡಗಳ ಮಹತ್ವದ ಬಗ್ಗೆ ತಿಳಿಸಿ, ಔಷಧೀಯ ಗಿಡಗಳನ್ನು ಗುರುತಿಸಿ ಅವುಗಳನ್ನು ಪೋಷಿಸಿ,ರಕ್ಷಿಸುವ ಕೆಲಸವನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ತಿಳಿಸಿದರು.

ಅಧ್ಯಾಪಕಸುರೇಶ್ ಎಂ.ಟಿ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಣ ಸಂಸ್ಥೆಯ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!