32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!