22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya
error: Content is protected !!